ಶನಿವಾರ, ಜೂನ್ 23, 2018

ಮಳೆ "ಕಾಲ - ಚಕ್ರ" - ಕವನ 12


ಓ ಸುಡುವ ಸೂರ್ಯನೇ
ನಿನಗೇಕೆ ಕೋಪವೇ ...
ಬಿಸಿಲ ಬೇಗೆ ನೆಲಕೆ ಬಡಿದು
 ಭೂತಾಯಿಯು ನರಳಿದೆ ...

ಓ ಮರಗಿಡ ಬೆಟ್ಟವೇ
ಸುಮ್ಮನೇಕೆ ನಿಂತಿರುವೇ ...
ನೀವು ತಡೆಯದ ತಂಗಾಳಿ
ಊರಬಿಟ್ಟು ಮರೆಯಾಗಿದೆ ...


ಓ ಅಲೆಮಾರಿ ಗಾಳಿಯೇ
ಎನ ವಿಳಾಸವ ಮರೆತೆಯೇ ...
ಕರೆದುಕೊಂಡು ಬಾರೊ ಒಮ್ಮೆ
ಬಿಳಿಮೋಡಗಳ ಹಿಂಡನೇ ...

ಓ ಬೆಳ್ಳಿ ಮೋಡವೇ
ಭೂತಾಯಿಯು ಬೇಡವೆ ...
ಬಿಸಿಲಬೇನೆಗೆ  ನರಳೋ ನೋಡಿ
ಕಣ್ ಮಳೆಹನಿಗಳ ಸುರಿಸಿರೆ ...

ಓ ಮಳೆಹನಿಗಳ ಮಾಲೆಯೇ
ನನ್ನ ದೂರ ತಿಳಿಯದೆ ...
ನಿನ್ನ ಬೆರೆತು ಈ ನೆಲವು
ಹಸಿರು ಹಸಿರಾ ಪಸರಿಸೆ ...

ಯಾವುದೊ ಈ ಮಾಯೆಯೋ
ಬಿಸಿಲು ಮಳೆಯ ಜಾಲವೋ ...
ಮಳೆ "ಕಾಲ - ಚಕ್ರ"ದೊಳಗೆ
ಉಕ್ಕಿ ಹರಿಯಲಿ ಏನ ಭಾವನೇ ..

ಗುರುವಾರ, ಮಾರ್ಚ್ 15, 2018

“ಸೋಮಾರಿ ಗಾನ” - ಕವನ 11



ಹೊತ್ತು ಕಳೆದರೇನಂತೇ 
ಜೊತೆಗೆ ಬರುವನು ಅವನು ..
ಸುತ್ತ ಇರುವವರ ತಿಳಿಯದೆ
ಎನಬೆನ್ನ ಬಿಡನು ಇವನು ..

ರವಿ ಬಂದರೇನಂತೇ
ಅವನಿಲ್ಲವೇ ನನಗಿಂದು ..
ಹೊತ್ತು ಕಳೆದರೂ ಹೋಗಲಿ
ಹೊಟ್ಟೆಗಿಟ್ಟು ಕೂಡ ಮರೆವೆನು ..

ಸ್ವಚ್ಛವಿಲ್ಲ ಎಂದರೇನಂತೇ
ಬೆಚ್ಚ ಮಲಗ ಬೇಕಿನ್ನು ..
ಎದ್ದು ಹೊರಡಬೇಕೆಂದರೆ
ಮುಗ್ಗರಿಸಿ ಬೀಳುವೆ ನಿನಬಲೆಗೆಂದು ..

ಅರ್ಧ ದಿನವು ನಿನದಾದರೇನಂತೇ
ನಾನಲ್ಲವೆ ನಿನ ಗುಲಾಮನು ..
ಯಾವ ಕೆಲಸವನೇಕೆ ಮಾಡಲಿ 
"ಸೋಮಾರಿ" ಎಂದೇಳುವೆ ನಿನ್ನ ಹೆಸರನು ..

ಭಾನುವಾರ, ಫೆಬ್ರವರಿ 18, 2018

“ಗಾಳಿ ಮಾತು” - ಕವನ 10





ಕಣ್ಣ ಸಿಲುಕದ ಗಾಳಿಯೊಂದು
ನುಸುಳಿ ಮನೆಗೆ ಬಂದಿದೆ..
ದಾರಿ ಮರೆತು ಬಂದಂತಿದೆ
ತರಗೆಲೆಗಳು ಅದರ ಜೊತೆಗೆಯೇ..

ಬಟ್ಟೆ ಬರೆಯು ಪುಟಗಳೆಲ್ಲ
ಹೆದರಿಕೊಂಡು ಓಡಿವೆ..
ಇದರ ಸ್ವಾಗತ ಬಯಸಿಕೊಂಡು
ಮರಗಿಡಗಳು ಬಾಗಿವೆ..

ಹಕ್ಕಿ ಹುಳುಗಳು ನಿನ್ನ ಬಗೆಯೆ
ಚೀರಿಕೊಂಡು ಸುತ್ತಿವೆ..
ನಿನ್ನ ತಂಪು ಮಾಡಲೆಂದೆ
ಮಳೆಹನಿಗಳು ಉದಿರಿವೆ..

ನಿನ್ನ ದಯೆಯೊ ನಿನ್ನ ಮಾಯೆಯೊ
ನನಗೊಂದೂ ತಿಳಿಯದು..
ನಿನ್ನ ನಂಬಿಕೊಂಡ ಜಗವು
ಬದುಕುವುದನ್ನ ಕಲಿತಿದೆ..

ಮಂಗಳವಾರ, ಜುಲೈ 4, 2017

“ಜನನ-ಮರಣ” - ಕವನ 9











ನಿದಿರೆಯೆಂಬ ಲೋಕದಲಿ
ನಡೆಯುತ್ತಿದೆ ಹೊಸ ತಿರುವುಗಳು..
ನಡುಗನಸಿನ ಪಾತ್ರದೊಳಗೆ
ನನ್ನನ್ನೊಮ್ಮೆ ಯಾರೋ ಕರೆವರು..


ಕಣ್ತೆರೆದು ನೋಡುತ್ತಿರಲು
ಹೊಸಜಗವ ನಾ ಕಂಡಿಹೆನು..
ಎಲ್ಲೋ ನೋಡಿರುವ ಈಜಗವು
ಹೊಸಬೆಳಕಲಿಂದು ಬೆರೆತಿಹುದು..


ಅಂದು ಕಂಡ ಇದೇ ಭುವಿಯು
ಮಂಜಾ ಮನದಿ ಮೂಡಿಹುದು..
ನಯನಗಳೆರಡು ಮಾಡಿವೆಯೊ ಮೋಡಿ
ನವಲೋಕದಂತಿಂದು ಕಾಣುವುದು..


ಮತ್ತೆ ಮರಣ ಮತ್ತೆ ಜನುಮ
ಪ್ರತಿದಿನವು ನಡೆವುದು..
ಕನಸು ನಿಜವೋ, ಕಣ್ತೆರೆದರೆ ನಿಜವೋ
ತಿಳಿಯದೆ ಮನವು ಕೊರಗುವುದು..


ಹೊಸಲೋಕದಿಂದ ಮತ್ತೆ ಮರಣ
ನಿದಿರೆಯಲೇ ನಾ ಕಳೆದೆನು..
ಮರುಜನನವು ಸಿಗುವುದೊ ನಾತಿಳಿಯೇ
ನಂಬಿಕೆಯೊಂದೆ ಇಲ್ಲಿ ಉಳಿದಿಹುದು..

ಮಂಗಳವಾರ, ಮೇ 23, 2017

7ರ ಮಗ್ಗಿಯಲ್ಲಿ ಜೀವನ ಚಕ್ರದ ಗಮ್ಮತ್ತು - ಟಾಂಗ್-ಕಿಂಗ್ (ಲೇಖನ) 1

7ರ ಮಗ್ಗಿಯಲ್ಲಿ ಜೀವನ ಚಕ್ರದ ಗಮ್ಮತ್ತು*


7 x 1 = 7 ಬಾಲ್ಯ ಪ್ರವೇಶ
7 x 2 = 14  ಯೌವ್ವನ ಪ್ರವೇಶ
7 x 3 = 21  ಪ್ರೀತಿ, ಪ್ರೇಮ, ಪ್ರಣಯ
7 x 4 = 28  ವಿವಾಹ, ಸ೦ತಾನ ಪ್ರಾಪ್ತಿ
7 x 5 = 35  ಸಂಸಾರ ಸಾಗರದಲ್ಲಿ ಈಜು ಸ್ಪರ್ದೆ
7 x 6 = 42  ಮಕ್ಕಳ ಯೌವ್ವನ ಪ್ರವೇಷ
7 x 7 = 49  ಸಂಸಾರದಲ್ಲಿ ರಾಜಕೀಯ, ನಾನು ನನ್ನ ಮನೆಯಲ್ಲಿ ಪರಕೀಯ
7 x 8 = 56  ನಿವೃತ್ತಿ, ಮಾವ ಅಥವಾ ಅಳಿಯ ಆಗುವ ಯೋ (ರೋ) ಗ
7 x 9 = 63  ಅರವತ್ತಕ್ಕೆ ಅರಳು ಮರಳು, ಷಷ್ಟಿ ಪೂರ್ತಿ
7 x 10 = 70 ವಿದಾಯ.!!!
ಸೋ .....ಇರೋ ತನಕ ಜಾಲಿ .ಆಮೇಲೆ ಖಾಲಿ ಊರಿಗೋಂದ್ ಊಟ...ಗೋಡೆಗೊಂದ್.... ಫೋಟೋ. ಅಸ್ಟೆ ಜೀವನ..... 

ಭಾನುವಾರ, ಏಪ್ರಿಲ್ 2, 2017

“ಸಮಯ ಮತ್ತು ಆಲೋಚನೆ” – ನಿಖರ ಮಾತು 3



ಜೀವನದಲ್ಲಿ ಏನೋ ಮಾಡಬೇಕೆಂಬ ಉತ್ಸಾಹ, ಆದರೆ ಮಾಡುವುದಾದರೂ ಏನು ? ಯಾವುದು ನನ್ನ ಗುರಿ? ನಾನು ತಪ್ಪಾದ ಹಾದಿಯಲ್ಲಿರುವನೇ? ಹೀಗೆ ಹಲವಾರು ಯೋಚನೆಗಳನ್ನ ಮಾಡುತ್ತಾ ಸಮಯ ಕಳೆಯುತಿದ್ದ ನನಗೆ ತಕ್ಷಣ ಮನದಿಂದ ಬಂದ ಉತ್ತರ “ಇಲ್ಲ, ನಿನ್ನ ಹಾದಿ ಸರಿಯಾಗಿದೆ, ಏನೋ ನಿನ್ನಿಂದಾಗಬೇಕು ಅದಕ್ಕೆ ಇಲ್ಲಿದ್ದೀಯ, ಅದು ಆಗುವುದಂತು ನಿಜ, ನಿನ್ನ ಪ್ರಯತ್ನ ಹಾಗು ಚಟುವಟಿಕೆಗಳನ್ನು ಬಿಡಬೇಡ.”

ಹೌದಲ್ಲವೆ?, ಇದು ನಿಜವೆಂದು ಅನಿಸತೊಡಗಿತು. ತಕ್ಷಣವೆ ಮನಸ್ಸನ್ನು ಬೇರೊಂದು ಚಟುವಟಿಕೆಗಳಲ್ಲಿ ಮಗ್ನನಾಗಿರಸುವಂತೆ ಮಾಡಿತು. ಪ್ರತಿದಿನದ ವ್ಯಾಯಾಮ, ದಿನಕ್ಕೆ ಸ್ವಲ್ಪ ಪುಸ್ತಕ ಓದುವುದು, ಅಡುಗೆ ಮಾಡುವುದು, ಕೊಂಚ ಹೊಸ ಭಾಷೆ ಅಥವಾ ವಿಷಯಗಳನ್ನು ಕಲಿಯುವುದು ಇಲ್ಲವೇ ಕವಿತೆ-ಲೇಖನಗಳನ್ನ ಬರೆಯುವುದು ಹೀಗೆ ಏನಾದರೂ ಚಟುವಟಿಕೆಗಳಲ್ಲಿ ತೊಡಗಿರುವ ನಾನು ಎಲ್ಲೋ ಗುರಿ ತಲುಪಲು ಇವುಗಳು ಸಹಾಯ ಮಾಡುವುದೆಂಬ ನಂಬಿಕೆ. ಸಮಯವನ್ನು ಬಳಸಿರಿ ಇಲ್ಲವೇ ಹಾಗೆ ಕಳೆಯಿರಿ, ಖಂಡಿತವಾಗಿಯೂ ಸಮಯವಂತು ನಿಮಗಾಗಿ ನಿಲ್ಲುವುದಿಲ್ಲ. ನಮ್ಮ ಜೀವನದ ಈ ಸಮಯವನ್ನು ಹಾಗೆಯೇ ಕಳೆಯುವುದರ ಬದಲು ಏನಾದರೂ ಮಾಡುತ್ತಾ ಕಳೆಯುವ ಅಂತ ಈ ರೀತಿ ಚಟುವಟಿಕೆಗಳಿಗೆ ಮುನ್ನುಡಿ ಹಾಕಿದೆ. ಪ್ರತಿಯೊಂದು ಕಾರ್ಯಕ್ಕೂ ಪ್ರತಿಫಲ ಸಿಗುವುದೋ ಇಲ್ಲವೋ, ಸಮಯವೆಂಬ ಅಮೂಲ್ಯ ಮೂಲಭೂತವನ್ನು ಬಳಸಿದೆನೆಂಬ ನೆಮ್ಮದಿ ದೊರೆಯುವುದು.

ಯಾವುದೋ ಒಂದು ಮಾದ್ಯಮದಲ್ಲಿ ತುಂಬಾ ಒಳ್ಳೆಯ ವಾಕ್ಯವೊಂದನ್ನು ಕಂಡೆನು. “ಸಾಧ್ಯ ಹಾಗು ಅಸಾಧ್ಯ ಇವೆರಡು ಕೂಡ ಸರಿಯಾದದ್ದೆ”, ಇದರ ಬಗ್ಗೆ ಯೋಚಿಸಿದಾಗ ನನಗೆ ತೋಚಿದ್ದು “ಹೌದು”. ಯಾವುದೇ ವಿಷಯದ ಆಯ್ಕೆಯು ಒಂದು ನಿರ್ದಿಷ್ಟ ಹಾದಿಯನ್ನು ತೋರಿಸುವುದು, “ಸಾಧ್ಯ”ವೆಂದರೆ ಅದೊಂದು ಹಾದಿಯಾದರೆ “ಅಸಾಧ್ಯ”ವೆಂಬುದು ಇನ್ನೊಂದು ಹಾದಿಯಲ್ಲಿ ಕರೆದುಕೊಂಡು ಹೋಗುವುದು. ಈಗೆ ಯೋಚಿಸುತ್ತಾ ಆಲೋಚನೆಗಳು ಎಷ್ಟು ಆಳಕ್ಕೆ ಹೋಯಿತೆಂದರೆ “ಇಲ್ಲಿ ಯಾವುದು ಕೂಡ ತಪ್ಪಲ್ಲ, ಎಲ್ಲವೂ ಸರಿ” ಎಂಬ ನಿರ್ಧಾರಕ್ಕೆ ಬರುವಂತೆ ಮಾಡಿತು. ಎಲ್ಲಾ ವಿಷಯಗಳಿಗೂ ಅದರದೇ ಆದಂತಹ ಅರ್ಥವಿರುವುದೆಂದು ಅರಿವಾಯಿತು. ಕೆಲವೊಮ್ಮೆ ಕೆಲವರ ಕೆಲವು ಮಾತುಗಳು ಕೂಡ ಸರಿಯಿಲ್ಲವೆಂದು ಎನಿಸುವುದುಂಟು, ಖಂಡಿತವಾಗಿಯೂ ಅದು ಬೇರೊಂದು ಬಗೆಯಲ್ಲಿ ಸರಿಯಾಗೇ ಇರಬಹುದು. ಎಲ್ಲಾ ಅವರವರ ಯೋಚನೆಗೆ ಬಿಟ್ಟದ್ದು. ಯೋಚನೆಗಳ ಆಳವು ಅನಂತವೆಂಬುದನ್ನು ನಾನು ತಿಳಿದುಕೊಂಡೆ.

ಈ ಮೆದುಳು ಎಂಬುವ ಜೀವಿಯಲ್ಲಿರುವ ಅದ್ಭುತ ಅಂಗ, ಕೆಲ ವಿದ್ಯುತ್ ಸಂದೇಶಗಳಲ್ಲಿ ಏನೇನೋ ಬದಲಾಯಿಸಿಬಿಡುತ್ತದೆ. ಹೀಗೆ ಯೋಚನೆಗಳಲ್ಲಿ ಮಗ್ನರಾಗಿರುವ ನಾನು ನನ್ನ ಗುರಿಯ ಚಿತ್ರಣ ನೋಡುವ ಸಮಯವು ತುಂಬಾ ಹತ್ತರದಲ್ಲಿರುವುದು, ಕೆಲದಿನಗಳೇ ಬಾಕಿ ಇದೆ ಅಂತ ಈ ಮನಕ್ಕೆ ಮುನ್ಸೂಚನೆ ಕೊಡುತ್ತಾ ಇರುತ್ತೆ. ನನ್ನಲ್ಲಿರುವ ಈ ಛಲ, ಶಕ್ತಿ ಎಲ್ಲಾದರೂ ಬಳಸಿ ಏನಾದರೂ ಬದಲಾವಣೆಗೆ ಕ್ರಾಂತಿ ಹೂಡಬೇಕೆಂಬ ತವಕದಲ್ಲೇ ಇರುವೆನು. ಯಾರಿಗೆ ಗೊತ್ತು! ಇವೆಲ್ಲವು ವಯಸ್ಸಿನ ಮಾಯೆಯೋ ಇಲ್ಲವೆ ಮನಸಿನ ಆಟವೇ! ಆದರೆ ಪ್ರತಿದಿನವು ಅದೇ ಶಕ್ತಿ, ಅದೇ ಛಲ ನನ್ನನ್ನು ಹುಮ್ಮಸ್ಸಿನಿಂದ ಇರಲು ಸಹಾಯ ಮಾಡುತ್ತಿರುತ್ತೆ. “ತಾಳ್ಮೆಯೊಂದಿದ್ದರೆ ಎಲ್ಲವೂ ಸಿಗುವುದು” ಎಂದು ಹೇಳಿರುವ ನಮ್ಮ ಹಿರಿಯರು, ಅವರ ಮಾತಿಗೆ ಬೆಲೆ ನೀಡಿ ತಾಳ್ಮೆಯಿಂದಲೇ ಎಲ್ಲವ ಅನುಸರಿಸಿ ಹೊಗುತ್ತಿರುವೆನು. ಸಾಧನೆಯೇ ಜೀವನದ ಗುರಿಯಿಲ್ಲದಿರಬಹುದು,ಆದರೆ ನಮ್ಮ ಜೀವನಕ್ಕೆ ಅರ್ಥ ಕಲ್ಪಿಸುವುದು ನಮ್ಮದೇ ಜವಬ್ದಾರಿಯಾಗಿರುವುದರಿಂದ ಆ ಅರ್ಥವನ್ನು ಕಟ್ಟುವ ಪ್ರಯತ್ನವು, ಬೆಳೆಸುವ ಶಕ್ತಿಯೂ ಸಿಗಲಿ ಅಂತ ಸಂಕಲ್ಪಿಸತ್ತಾ ಇಂದಿನಿಂದಲೇ ಸಮಯದ ಜೊತೆಯಲ್ಲೇ ಆಲೋಚನೆಗಳ ಸಾಗರದಲ್ಲಿ ಈಜುವ ಎಂಬುದು ನನ್ನ ಆಶಯ.

ಬುಧವಾರ, ಫೆಬ್ರವರಿ 22, 2017

“ಹೊಸ ಅನುಭವ” - ಕವನ 8



ಮುಂಜಾನೆಯು ಹೊಸತಾದಂತಿದೆ..
ಸೂರ್ಯಕಿರಣವು ತಿಳಿಯಾಗಿದೆ..
ತಂಗಾಳಿಯ ರಭಸಕೆ ತಾಕಿದ ದೇಹವು
ಮೆಲ್ಲನೆ ರೋಮಾಂಚನಗೊಂಡಿದೆ….

ಎಲೆಗಳು ಕುಣಿದಂತಿದೆ..
ಹಕ್ಕಿಗಳು ಖುಷಿಯಾಗಿದೆ..
ಕನಸ ಕಾಣುವ ಕಣ್ಣಿಗೆ ಎಲ್ಲವು
ಇಂದು ಸೊಗಸಾಗಿ ಕಂಡಿದೆ….

ಸಮಯ ಬದಲಾದಂತಿದೆ..
ದಿನವೂ ಹಸಿರಾಗಿದೆ..
ಇವುಗಳ ನಡುವಿನ ನನ್ನ ಜೀವನ
ಹೊಸ ಅನುಭವವ ಪಡೆದಿದೆ….