ಶುಕ್ರವಾರ, ಜುಲೈ 19, 2019

"ಭಿಕಾರಿ ಬದುಕು" - ಕವನ 16




ಮುಂಜಾನೆಯ ಆ ತಾಜಾ ಮಜಾ
ಇಲ್ಲವಾಗಿದೆ ...
ಹೊಸದಿನವೆಂಬ ಖುಷಿಯೂ  ಇಂದು
ಕಮ್ಮಿಯಾಗಿದೆ ...
ಸೂರ್ಯಚಂದ್ರರ ಬರುವು ತಿಳಿಯದೆ
ಮರೆತೇಹೋಗಿದೆ ...
ಏನಿದು ಈ ಬದುಕು, ಈ ತರ
ಭಿಕಾರಿಯಾಗಿದೆ ....

ಏನೇ ಆಗಲಿ, ಊರೇ ಬೀಳಲಿ ಎಂಬ
ಭಾವನೆ ಬೆಳೆದಿದೆ ...
ತವಕವೆ ಇಲ್ಲದ ಈ ಹೃದಯ
ಮೆಲ್ಲಚಲಿಸಿದೆ ... 
ತಾರುಣ್ಯ ಮರೆತ ದೇಹವು
ಸೊರಗಿಹೋಗಿದೆ ...
ಏನಿದು ಈ ಬದುಕು, ಈ ತರ
ಭಿಕಾರಿಯಾಗಿದೆ ....

ಏನೋ ತಿಳಿದುಕೊಳ್ಳುವ ಆಸೆ
ಈಗಮಾಸಿದೆ ...
ಮಾಸದ ಸಂಬಳ ಸರಿಸಮಯಕ್ಕೆ
ಬಂದುಸೇರಿದೆ ...
ಎಲ್ಲಾ ಇದ್ದೂ, ಏನೋ ಇಲ್ಲವೆಂಬ
ಕೊರಗುಮೂಡಿದೆ ...
ಏನಿದು ಈ ಬದುಕು, ಈ ತರ
ಭಿಕಾರಿಯಾಗಿದೆ ....


ಗುರುವಾರ, ಮೇ 9, 2019

"ನಡುರಾತ್ರಿಯ ಹಾದಿಯಲಿ" - ಕವನ 15


ನಡುರಾತ್ರಿಯ ಹಾದಿಯಲಿ
ನಡೆಯುತ್ತಿರುವೆನು ನಾನೊಬ್ಬನೇ ...
ಬೀದಿದೀಪಗಳು ತಲೆಬಾಗಿ
ನೋಡುತ್ತಿವೆ ನನ್ನನೇ ...
ಧರೆಯ ಬೆಡಗಿಗೆ ಚಂದ್ರನು
ನಾಚಿ ಮರೆಯಾದ ಬೇಗನೇ...
ಆಹಾ! ರಾತ್ರಿಯ ಈ ಸೊಗಸನು
ಸವಿಯದವ ಇದ ಬಲ್ಲನೇ ...


ನಡುರಾತ್ರಿಯ ಹಾದಿಯಲಿ
ಏಕಾಂಗಿಯಾದೆನು ನನ್ನೊಳಗೆ...
ಜೊತೆಗಿರಬೇಕಿತ್ತು ಒಂದು ಸಖಿ  
ಇದನೆನೆದು ಮೂಡಿತು ಮುಗುಳುನಗೆ...
ನಾಯಿಗಳು ಬೊಗಳದೆಯೇ
ಗುರುಗುಟ್ಟುತ್ತಿವೆ ಸುಮ್ಮಗೆ ...
ನಡೆದು ಆಯಾಸವೆನಿಸಿದರೂ
ಸಾಗುತ್ತಿರುವೆನು ಮೆಲ್ಲಗೆ...

ನಡುರಾತ್ರಿಯ ಹಾದಿಯಲಿ
ಸುಳಿಯುತಿಹುದು ಗುರಿಯೋಚನೆ...
ಮನುಷ್ಯನಿರದ ಈವೇಳೆಗೆ  
ಶಾಂತತಾಳಿದೆ ಏನ ಭಾವನೆ ...
ಬೀಸೋ ಗಾಳಿಗೆ ಸಿಲುಕಿ
ಧೂಳುಕಣಗಳ ಚಲನೆ...
ಬಹುದೂರ ಬಾಕಿ ಇರುವುದೂ
ತಲುಪಲೂ ನಮ್ಮನೆ...


"ಮಹಾಗುರು" - ಕವನ 14




ಒಳ್ಳೆತನವ ಕಲಿಸಯ್ಯಾ ಗುರುವೇ
ನೀನಾಗುವೆ ಜಗದ ಮಹಾಗುರು
ಶಿಷ್ಯನಿಗಿಂತಲೂ ನೀನಿರುವೆನು ಎತ್ತರ ಬಹುಪಾಲು ...

ಕಳ್ಳತನವೆಂಬುದನ್ನ ಕಳಿಸಿದರಯ್ಯ
ಮರುಗುವೆಯೋ ಇದನ್ನರಿತು ಮುಂದು
ಶಿಷ್ಯನಾಗುವನು ನಿನ್ನ ಮೀರಿಸುವ ಮಹಾಕಳ್ಳ ನು ...

ಲೋಕನಿಯಮವ ಯಾರರಿವರಯ್ಯ
ಒಳ್ಳೆತನವೆಂಬುದು ಬೆಳೆಸುವುದು ಎತ್ತರದಿ
ಕಳ್ಳತನವು ಅಳಿಯುದು ಈ ಜಗದಿ ...

ಗುರುವಾರ, ಮಾರ್ಚ್ 28, 2019

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಲ್ಲ !! | ಟಾಂಗ್-ಕಿಂಗ್ (ಲೇಖನ) 2


ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಳೆದ ಕೆಲವು ವರುಷಗಳಿಂದ ಪ್ರಯಾಣಿಕರ ನಿರಂತರ ಧನಾತ್ಮಕ ವೃದ್ಧಿಯಿಂದ ಹೆಸರುಗಳಿಸಿದೆ.




ಆದರೆ ಈಗ ಮಂಗಳೂರಿನಲ್ಲಿ ವೈಮಾನಿಕ ಪ್ರಯಾಣಿಕರ ಸಂಖ್ಯೆ ಕುಗ್ಗುತ್ತಿದೆ. ಆದರೇ ಇದೇನು ದಿಢೀರ್ ಬದಲಾವಣೆಯಲ್ಲ, ಭವಿಷ್ಯದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿಪ್ರಯಾಣಿಕರ ಸಂಖ್ಯೆ ಇಳಿಮುಖವಾಗುವುದೆಂದು ಕಳೆದ ಕೆಲವು ವರುಷಗಳಿಂದಲೇ ಅಂದಾಜಿಸಲಾಗುತಿತ್ತು. ಈ ಸಂದೇಹವನ್ನು ಹುಟ್ಟು ಹಾಕಲು ಮುಖ್ಯ ಕಾರಣಾವಾಗಿದ್ದು ಕೇರಳ ರಾಜ್ಯದ ಕಣ್ಣೂರು ಎಂಬ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಾಣಗೊಳ್ಳಲಾರಂಭಿಸಿದ ಕೇರಳದ ನಾಲ್ಕನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.

ಹೌದು, ತಿರುವನಂತಪುರಂ, ಕೊಚ್ಚಿ,ಕಲ್ಲಿಕೋಟೆ ನಂತರ ಕಣ್ಣೂರು ಕೇರಳದ ನಾಲ್ಕನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕೇಂದ್ರ. (ಕರ್ನಾಟಕದಲ್ಲಿ ಬೆಂಗಳೂರು ಹೊರತು ಪಡಿಸಿದರೆ ಮಂಗಳೂರು ಮಾತ್ರ) ಆದರೆ ಇದರಿಂದ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಏನು ತೊಂದರೆ ಎಂದು ಕೇಳುವುದಾದರೆ ಕಣ್ಣೂರು ಇರುವುದು ಮಂಗಳೂರಿನಿಂದ ಬರೇ ೧೪೩ ಕಿ.ಮೀ. ದೂರದಲ್ಲಿ. ಈ ಮೊದಲು ಮಂಗಳೂರು ವಿಮಾನ ನಿಲ್ದಾಣ ಬರೀ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮಾತ್ರವಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಕಾಸರಗೋಡು ಹಾಗು ಕೇರಳದ ಉತ್ತರ ಭಾಗದ ಜಿಲ್ಲೆಯ ಪ್ರಯಾಣಿಕರಿಗೂ ಆಸರೆಯಾಗಿತ್ತು. ಆದರೆ ನೂತನ ಕಣ್ಣೂರು ವಿಮಾನ ನಿಲ್ದಾಣದವು ಕೊಡಗು ಹಾಗು ಕಾಸರಗೋಡು ಜಿಲ್ಲೆಗಳಿಗೆ ಸಮೀಪದಲ್ಲಿರುವುದರಿಂದ ಈ ಜಿಲ್ಲೆಯ ಪ್ರಯಾಣಿಕರು ಕಣ್ಣೂರಿನ ಕಡೆಗೆ ಆಕರ್ಷಿತರಾಗೋದು ಸರ್ವೇ ಸಾಮಾನ್ಯ. ಮಾತ್ರವಲ್ಲದೆ ಕಣ್ಣೂರಿನ ವಿಮಾನ ನಿಲ್ದಾಣದ ಓಟದಾರಿ (ರನ್ ವೇ) ಮಂಗಳೂರಿನ ನಿಲ್ದಾಣಕ್ಕಿಂತ ಬರೋಬ್ಬರಿ ೧೦೦೦ ಮೀಟರ್ ಉದ್ದವಿದೆ (ಒಟ್ಟು ಉದ್ದ ೩೫೦೦ ಮೀ) ಹೀಗಾಗಿ ಇಲ್ಲಿ ವಿದೇಶಿ ವೈಮಾನಿಕ ಸಂಸ್ಥೆಗಳು ಪ್ರಯಾಣಕ್ಕಾಗಿ ಹಾತೊರೆಯುತ್ತಿವೆ. ಮಂಗಳೂರಿನ ಟೇಬಲ್ ಟಾಪ್ ರನ್ ವೇ ಉದ್ದ ಬರೇ ೨೪೫೦ ಮೀಟರ್ ಗಳಿಗೆ ಸೀಮಿತವಾಗಿರಿರುವುದರಿಂದ ವಿದೇಶಿ ವಿಮಾನಗಳು ಈ ಕಡೆ ತಲೆನೂ ಹಾಕುತ್ತಿಲ್ಲ. (ಮಂಗಳೂರಿನಿಂದ ಹಾರಾಟ ನಡೆಸುತ್ತಿರುವ ಅಂತಾರಾಷ್ಟ್ರೀಯ ವಿಮಾನಗಳು ಭಾರತೀಯ ಮೂಲದವೇ ಆಗಿವೆ.)

ಅಂತೂ ಡಿಸೆಂಬರ್ ೦೯, ೨೦೧೮ ರಂದು ಕಣ್ಣೂರು ವಿಮಾನ ನಿಲ್ದಾಣ ಉದ್ಘಾಟನೆಯಾಗಿ ಲೋಕಾರ್ಪಣೆಗೊಂಡಿತು. ಕಳೆದ ಮೂರು ತಿಂಗಳಲ್ಲಿ ಕಣ್ಣೂರಿನಲ್ಲಿ ವಿಮಾನಗಳ ಹಾರಾಟ ಸಂಖ್ಯೆ ವೃದ್ಧಿಯಾಗುತ್ತಲೇ ಬರುತ್ತಿದೆ. ಅದಕ್ಕೆ ಪೂರಕವಾಗಿ ಕಳೆದ ಮೂರು ತಿಂಗಳಲ್ಲಿ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗುತ್ತಿದೆ.

ಹಾಗಾದರೆ ಊಹೆ/ಅನುಮಾನ/ನುಡಿದ ಭವಿಷ್ಯ ನಿಜವಾಯಿತೇ? ಕಣ್ಣೂರು ವಿಮಾನ ನಿಲ್ದಾಣ ಉದ್ಘಾಟನೆಯಿಂದ ಮಂಗಳೂರು ನಿಲ್ದಾಣಕ್ಕೆ ಪೆಟ್ಟು ಬಿತ್ತೇ?

ಇಲ್ಲ, ಇದ್ಯಾವುದು ನಿಜವಲ್ಲ,

ಒಂದು ಬಾರಿ ಈ ಕೆಳಗಿನ ವಿಷಯಗಳನ್ನು ಪರಿಗಣಿಸಿ.

೧. ದೂರ :

ಕಾಸರಗೋಡು ಹಾಗು ಮಡಿಕೇರಿ (ಕೊಡಗು) ಜನರಿಗೆ ಈ ಎರಡು ವಿಮಾನ ನಿಲ್ದಾಣಗಳು ಎಷ್ಟು ದೂರದಲ್ಲಿವೆ ಎಂದು ಪರಿಶೀಲಿಸೋಣ.


ಅ) ಕಾಸರಗೋಡು-ಮಂಗಳೂರು


ಕಾಸರಗೋಡು ನಿಂದ ಮಂಗಳೂರು ೫೯ ಕಿ.ಮೀ. (ಸಮಯ ೧ ಘಂಟೆ ೩೦ ನಿಮಿಷಗಳು)


ಆ) ಕಾಸರಗೋಡು - ಕಣ್ಣೂರು



ಕಾಸರಗೋಡು ನಿಂದ ಕಣ್ಣೂರು ೧೧೨ ಕಿ.ಮೀ. (ಸಮಯ ೩ ಘಂಟೆ ೧೦ ನಿಮಿಷಗಳು)


ಕಾಸರಗೋಡಿ ನಿಂದ  ಕಣ್ಣೂರು , ಮಂಗಳೂರಿಗಿಂತ ಬರೋಬರಿ ಎರಡು ಪಟ್ಟು ದೂರದಲ್ಲಿದೆ.
ಸ್ವತಃ ಕಣ್ಣೂರು ನಗರದಿಂದ ಕಣ್ಣೂರು ವಿಮಾನ ನಿಲ್ದಾಣ ಸುಮಾರು ೨೭ ಕಿ. ಮೀ. ದೂರದಲ್ಲಿದೆ. ಕಾಸರಗೋಡು ಜಿಲ್ಲೆಯ ದಕ್ಷಿಣ ತುತ್ತ ತುದಿಯಿಂದಲೂ ಮಂಗಳೂರೇ ಸಮೀಪ. ಹೀಗಾಗಿ ದುಬೈ ಹಾಗು ಇತರೆ ಗಲ್ಫ್ ರಾಷ್ಟ್ರಗಳಿಗೆ ಹೋಗುವ ಕಾಸರಗೋಡಿನ ಪ್ರಯಾಣಿಕರು ಕಣ್ಣುರಿನೆಡೆಗೆ ಮುಖಮಾಡುತ್ತಾರೆ ಎಂಬ ಊಹಾ ಪೋಹಾ ವನ್ನು ಸುಲಭವಾಗಿ ತಳ್ಳಿ ಹಾಕಬಹುದು.


ಈಗ ಕೊಡಗು ಜಿಲ್ಲೆ ನೋಡೋಣ.

ಇ) ಮಡಿಕೇರಿ-ಮಂಗಳೂರು



     ಮಡಿಕೇರಿ (ಕೊಡಗು)-ಮಂಗಳೂರು ೧೪೪ ಕಿ.ಮೀ. (ಸಮಯ ೩ ಘಂಟೆ ೨೩ ನಿಮಿಷಗಳು)


ಈ) ಮಡಿಕೇರಿ-ಕಣ್ಣೂರು



            ಮಡಿಕೇರಿ(ಕೊಡಗು)-ಕಣ್ಣೂರು ೯೦ ಕಿ.ಮೀ (ಸಮಯ ೨ ಘಂಟೆ ೩೩ ನಿಮಿಷಗಳು)

ಮಡಿಕೇರಿ ಜನರಿಗೆ ಕಣ್ಣೂರು ವಿಮಾನ ನಿಲ್ದಾಣ ಮಂಗಳೂರಿಗಿಂತ ಹೆಚ್ಚು ಸಮೀಪ. ಕೊಡಗಿನ ಮತ್ತೊಂದು ನಗರ ವಿರಾಜಪೇಟೆಯಿಂದ ಕಣ್ಣೂರು ಬರೇ ೬೦ ಕಿ.ಮೀ. ದೂರದಲ್ಲಿ ಇದೆ. ಹಾಗಾಗಿ ಇಲ್ಲಿನ ಜನರು ಮಂಗಳೂರಿಗೆ ಬರುವ ಸುಮಾರು ಒಂದರಿಂದ ಎರಡು ತಾಸಿನಷ್ಟು ಸಮಯವನ್ನು ಉಳಿಸಬಹುದಾಗಿದೆ. ಮಾತ್ರವಲ್ಲದೆ ಕಣ್ಣೂರು ವಿಮಾನ ನಿಲ್ದಾಣದಿಂದ ಕೊಡಗು ಜಿಲ್ಲೆಯ ಪ್ರವಾಸೋದ್ಯಮ ದಲ್ಲಿಯೂ ಬೆಳವಣಿಗೆಯಾಗುವ ಸಾಧ್ಯತೆಗಳಿವೆ.


) ವಿಮಾನಯಾನ ತಾಣಗಳು

ಇನ್ನು ಈ ಎರಡು ವಿಮಾನ ನಿಲ್ದಾಣಗಳು ಯಾವೆಲ್ಲ ಜಾಗಗಳಿಗೆ ಪ್ರಯಾಣ ಕಲ್ಪಿಸಿ ಕೊಡುತ್ತವೆ ಎಂದು ನೋಡೋಣ.

ಮಂಗಳೂರಿನ ವಿಮಾನಯಾನ ತಾಣಗಳು



ಕಣ್ಣೂರಿನ ವಿಮಾನಯಾನ ತಾಣಗಳು:




ಕಣ್ಣೂರು ಹಾಗು ಮಂಗಳೂರಿನಿಂದ ವಿಮಾನಗಳು ಹೆಚ್ಚು ಕಮ್ಮಿ ಸಮನಾದ ಜಾಗಗಳಿಗೆ ಪ್ರಯಾಣಿಸುತ್ತಿವೆ. ಸ್ಪಷ್ಟವಾಗಿ ಕಣ್ಣೂರಿನಿಂದ ವಿಮಾನಗಳು ಇನ್ನು ಪೂರ್ಣಗತಿಯಲ್ಲಿ ಪ್ರಾರಂಭವಾಗಿಲ್ಲ, ಅದಕ್ಕಿನ್ನೂ ಮೂರು ತಿಂಗಳು ಹೆಚ್ಚು ಸಮಯ ಬೇಕಾಗುವುದು.

ಹಾಗಾದರೆ ಮಂಗಳೂರಿನಲ್ಲಿ ಪ್ರಯಾಣಿಕರ ಇಳಿಮುಖಕ್ಕೆ ಕಾರಣವೇನು?

ಅದಕುತ್ತರ , ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಭಾರತದ ಜೆಟ್ ಏರ್ವೇಸ್ (Jet Airways) ವಿಮಾನ ಸಂಸ್ಥೆ.
ಹೌದು, ಕಳೆದ ವರ್ಷದ ಅಂಕಿ ಅಂಶಗಳ ಪ್ರಕಾರ ಮಂಗಳೂರಿನಿಂದ ಪ್ರತಿದಿನ ಜೆಟ್ ಏರ್ವೇಸ್ ನ ವಿಮಾನಗಳು ಮುಂಬೈ ಕಡೆಗೆ , ವಿಮಾನಗಳು ಬೆಂಗಳೂರಿನೆಡೆಗೆ ಹಾಗು ತಲಾ ೧ ವಿಮಾನ ದೆಹಲಿ, ದುಬೈ ಶಾರ್ಜಾ, ಹಾಗು ಅಬುದಾಬಿ ಕಡೆಗೆ ಪ್ರಯಾಣಿಸುತಿದ್ದವು. ಮಂಗಳೂರಿನಲ್ಲಿ   ಜೆಟ್ ಏರ್ವೇಸ್ ವಿಮಾನಗಳದ್ದೇ  ಮೇಲುಗೈ ಇತ್ತು. ಆದರೆ ಈಗ ಜೆಟ್ ಏರ್ವೇಸ್ ಸಂಸ್ಥೆಯ ಆರ್ಥಿಕ ಬಿಕ್ಕಟ್ಟಿನಿಂದ ಮಂಗಳೂರಿನ ಕಡೆ ಹಾರಾಟ ನಡೆಸುತ್ತಿದ್ದ ಎಲ್ಲಾ ಜೆಟ್ ಏರ್ವೇಸ್ ವಿಮಾನಗಳು ಒಂದರ ನಂತರ ಒಂದರಂತೆ ಸ್ಥಗಿತಗೊಂಡಿವೆ. (ಮೇಲಿನ ಮಂಗಳೂರಿನ ವಿಮಾನಯಾನ ತಾಣಗಳ ಪಟ್ಟಿಯಲ್ಲಿ ನೀವು ಗಮನಿಸಬಹುದು.) ದಿನಂಪ್ರತಿ ಇಲ್ಲಿ ೫೮ ವಿಮಾನಗಳು ಓಡಾಟ ನಡೆಸುತಿದ್ದವು ಆದರೆ ಈಗ ಈ ಸಂಖ್ಯೆ ೨೫ ಕ್ಕೆ ಕುಸಿದಿದೆ. ಇದರ ಬದಲಾಗಿ ಬೇರೆ ವಿಮಾನ ಸಂಸ್ಥೆಗಳು ಮಂಗಳೂರಿಗೆ ತಮ್ಮ ವಿಮಾನಗಳ ಸಂಖ್ಯೆಯನ್ನೇನು ಹೆಚ್ಚಿಸಿಲ್ಲ. ಹೀಗಾಗಿ ಕಳೆದ ಒಂದು ತಿಂಗಳಲ್ಲಿ ಮಂಗಳೂರಿನಲ್ಲಿ ಪ್ರಯಾಣಿಕರ ಸಂಖ್ಯೆ ಶೇಕಡಾ ೩೦ ರಷ್ಟು ಕುಗ್ಗಿದೆ. ಅಲ್ಲ ಸ್ವಾಮಿ ವಿಮಾನಗೆಳೆ ಇಲ್ಲದ ಮೇಲೆ ಜನರು ಪ್ರಯಾಣಿಸುವುದಾದರು ಹೇಗೆ ಹೇಳಿ?

ಜೆಟ್ ಏರ್ವೇಸ್ ಸಂಸ್ಥೆ ತನ್ನ ಆರ್ಥಿಕ ಬಿಕ್ಕಟ್ಟಿನಿಂದ ಹೊರಬರುವ ನೀರಿಕ್ಷೆಯಲ್ಲಿದೆ. ಹೀಗಾಗಿ ತನ್ನ ವಿಮಾನಗಳನ್ನು ಪುನಃ ಹಿಂದಿನಂತೆಯೇ ಚಲಾಯಿಸಲು ಮೇ ತಿಂಗಳಿನ ಗಡುವು ತೆಗೆದುಕೊಂಡಿದೆ. ಹೀಗಾದರೆ ಮತ್ತೆ ಮಂಗಳೂರಿನಲ್ಲಿ ಮೊದಲಿನ ಹಾಗೆ ವಿಮಾನಗಳ ಸಂಖ್ಯೆ ದಿನಂಪ್ರತಿ ೫೦ ಮೀರಲಿದೆ ಹಾಗು ಪ್ರಯಾಣಿಕರ ಸಂಚಾರದಲ್ಲೂ ವೃದ್ಧಿಯಾಗಲಿದೆ.

ಇತ್ತೀಚಿನ ಬೆಳೆವಣಿಗೆಗಳ ಪ್ರಕಾರ ವಿಮಾನ ನಿಲ್ದಾಣಗಳನ್ನು ಖಾಸಗಿಕರಣ ಗೊಳಿಸುವ ನಿಟ್ಟಿನಲ್ಲಿ ಮಂಗಳೂರು ವಿಮಾನ ನಿಲ್ದಾಣವನ್ನು ಈಗಾಗಲೇ ಅದಾನಿ ಸಂಸ್ಥೆ ಬಿಡ್ಡಿಂಗ್ ನಲ್ಲಿ ಗೆದ್ದು ಕೊಂಡಿದೆ. ಮಂಗಳೂರಿನ ವಿಮಾನ ನಿಲ್ದಾಣ ಖಾಸಗೀಕರಣಗೊಂಡರೆ ಸ್ವಲ್ಪ ಹೆಚ್ಚುವರಿ ಅಭಿವೃದ್ಧಿಯನ್ನು ನಾವು ಕಾಣಬಹುದಾಗಿದೆ. ಆದರೆ ವಿಮಾನ ನಿಲ್ದಾಣದ ರನ್ ವೇ ಉದ್ದಪಡಿಸುವ ವಿಚಾರ ಮಾತ್ರ ಇನ್ನೂ "ಬೆಕ್ಕಿನ ಕೊರಳಿಗೆ ಘಂಟೆ ಕಟ್ಟುವವರಾರು?" ಎಂಬಂತೆ ಉಳಿದು ಬಿಟ್ಟಿದೆ. ರನ್ ವೇ ಉದ್ದಗೊಂಡರೆ ಭವಿಷ್ಯದಲ್ಲಿ ಐರೋಪ್ಯ ರಾಷ್ಟ್ರಗಳಿಗೂ ಮಂಗಳೂರಿನಿಂದಲೇ ಪ್ರಯಾಣ ಬೆಳೆಸಬಹುದಾಗಿದೆ. (ಅದಕ್ಕಾಗಿ ಈಗ ಮಂಗಳೂರಿಗರು ಬೆಂಗಳೂರನ್ನು ಅವಲಂಬಿಸಿದ್ದಾರೆ) ಹೀಗಾದರೆ ಮಾತ್ರ ಮಂಗಳೂರು ಕಣ್ಣೂರಿನ ವಿಮಾನ ನಿಲ್ದಾಣಕ್ಕೆ ಸೆಡ್ಡು ಹೊಡೆದು ನಿಲ್ಲಲು ಸಾಧ್ಯ . ಇಲ್ಲದಿದ್ದರೆ ಕಣ್ಣೂರು ಐರೋಪ್ಯ ರಾಷ್ಟ್ರಗಳಿಗೆ ಸಂಪರ್ಕ ಒದಗಿಸಿ ಸ್ವತಃ ಮಂಗಳೂರಿಗರನ್ನೇ ಆಕರ್ಷಿಸಿದರೆ ಆಶ್ಚರ್ಯವೇನಿಲ್ಲ.

ಗುರುವಾರ, ಫೆಬ್ರವರಿ 21, 2019

"ಇರುವುದೊಂದೇ ಈ ಜೀವನವು" - ಕವನ 13




ಜಲಪಾತದ ನೀರಿನ ರಭಸದಂತೇ
ಉರುಳಿ ಹೋಗುತಿದೆ ಎನದಿನಗಳು ...
ಮನದಾಸೆಗಳೆಲ್ಲವೂ ತೀರದೆಯೇ
ಜೀವನದಂತ್ಯದ ಸಾಗರ ಸೇರುತಿಹುದು ...

ಮುಂದೆ ಸಾಗುತ್ತಿಲ್ಲ, ಹಿಂದೆ ಬರುವಂತಿಲ್ಲ
ನಡುವಲಿ ನಿಂತಿದೆ ಜೀವನ ನೌಕೆಯೂ ...
ಕನಸ ಕಂಡೇ ಉಳಿದಿರುವೆನು
ದಡ ಸೇರೋ ಗುರಿಯನು ಮರೆತು ...

ಮರೆತೇ ಕಳೆದರೂ, ಬದುಕಿ ಉಳಿದರೂ
ಕಾಲವು ಯಾರನು ಕಾಯದು ...
ಇಂದೇ ಎಂಬುವ ನಂಬಿಕೆ ಹಿಡಿಯದೇ 
ಪಯಣವು ಮುಂದೇ ಸಾಗದು ...

ಇರುವುದೊಂದೇ ಈ ಜೀವನವು
ಬರಲೀ ಸಾಧಿಸುವಂಥಹ ಮನಛಲವು...
ಉಳಿದಿರುವುದು ಕೆಲಕ್ಷಣಗಳೂ
ಸಾರ್ಥಕವಾಗುವಂತಾಗಲಿ ಈ ಜನುಮವು... 


ಮಂಗಳವಾರ, ಜುಲೈ 3, 2018

"ಕಾಗದ ದೋಣಿ" ಆಂಡ್ರೋಯ್ಡ್ ಅಪ್ಲಿಕೇಶನ್ ಬಳಸಿ

ಸ್ನೇಹಿತರೇ,
"ಕಾಗದ ದೋಣಿ" ಓದುವುದು ಈಗ ಮತ್ತಷ್ಟು ಸುಲಭವಾಗಿದ್ದು ನಮ್ಮ ಹೊಸ "ಕಾಗದ ದೋಣಿ" ಆಂಡ್ರೋಯ್ಡ್ ಅಪ್ಲಿಕೇಶನ್ ಬಳಸಿ ನಿಮ್ಮ ಮೊಬೈಲ್ ನಲಿ.

ಇಲ್ಲಿ ದೊರೆಯುವುದು

ಶನಿವಾರ, ಜೂನ್ 23, 2018

ಮಳೆ "ಕಾಲ - ಚಕ್ರ" - ಕವನ 12


ಓ ಸುಡುವ ಸೂರ್ಯನೇ
ನಿನಗೇಕೆ ಕೋಪವೇ ...
ಬಿಸಿಲ ಬೇಗೆ ನೆಲಕೆ ಬಡಿದು
 ಭೂತಾಯಿಯು ನರಳಿದೆ ...

ಓ ಮರಗಿಡ ಬೆಟ್ಟವೇ
ಸುಮ್ಮನೇಕೆ ನಿಂತಿರುವೇ ...
ನೀವು ತಡೆಯದ ತಂಗಾಳಿ
ಊರಬಿಟ್ಟು ಮರೆಯಾಗಿದೆ ...


ಓ ಅಲೆಮಾರಿ ಗಾಳಿಯೇ
ಎನ ವಿಳಾಸವ ಮರೆತೆಯೇ ...
ಕರೆದುಕೊಂಡು ಬಾರೊ ಒಮ್ಮೆ
ಬಿಳಿಮೋಡಗಳ ಹಿಂಡನೇ ...

ಓ ಬೆಳ್ಳಿ ಮೋಡವೇ
ಭೂತಾಯಿಯು ಬೇಡವೆ ...
ಬಿಸಿಲಬೇನೆಗೆ  ನರಳೋ ನೋಡಿ
ಕಣ್ ಮಳೆಹನಿಗಳ ಸುರಿಸಿರೆ ...

ಓ ಮಳೆಹನಿಗಳ ಮಾಲೆಯೇ
ನನ್ನ ದೂರ ತಿಳಿಯದೆ ...
ನಿನ್ನ ಬೆರೆತು ಈ ನೆಲವು
ಹಸಿರು ಹಸಿರಾ ಪಸರಿಸೆ ...

ಯಾವುದೊ ಈ ಮಾಯೆಯೋ
ಬಿಸಿಲು ಮಳೆಯ ಜಾಲವೋ ...
ಮಳೆ "ಕಾಲ - ಚಕ್ರ"ದೊಳಗೆ
ಉಕ್ಕಿ ಹರಿಯಲಿ ಏನ ಭಾವನೇ ..