ಗುರುವಾರ, ಫೆಬ್ರವರಿ 21, 2019

"ಇರುವುದೊಂದೇ ಈ ಜೀವನವು" - ಕವನ 13




ಜಲಪಾತದ ನೀರಿನ ರಭಸದಂತೇ
ಉರುಳಿ ಹೋಗುತಿದೆ ಎನದಿನಗಳು ...
ಮನದಾಸೆಗಳೆಲ್ಲವೂ ತೀರದೆಯೇ
ಜೀವನದಂತ್ಯದ ಸಾಗರ ಸೇರುತಿಹುದು ...

ಮುಂದೆ ಸಾಗುತ್ತಿಲ್ಲ, ಹಿಂದೆ ಬರುವಂತಿಲ್ಲ
ನಡುವಲಿ ನಿಂತಿದೆ ಜೀವನ ನೌಕೆಯೂ ...
ಕನಸ ಕಂಡೇ ಉಳಿದಿರುವೆನು
ದಡ ಸೇರೋ ಗುರಿಯನು ಮರೆತು ...

ಮರೆತೇ ಕಳೆದರೂ, ಬದುಕಿ ಉಳಿದರೂ
ಕಾಲವು ಯಾರನು ಕಾಯದು ...
ಇಂದೇ ಎಂಬುವ ನಂಬಿಕೆ ಹಿಡಿಯದೇ 
ಪಯಣವು ಮುಂದೇ ಸಾಗದು ...

ಇರುವುದೊಂದೇ ಈ ಜೀವನವು
ಬರಲೀ ಸಾಧಿಸುವಂಥಹ ಮನಛಲವು...
ಉಳಿದಿರುವುದು ಕೆಲಕ್ಷಣಗಳೂ
ಸಾರ್ಥಕವಾಗುವಂತಾಗಲಿ ಈ ಜನುಮವು... 


ಮಂಗಳವಾರ, ಜುಲೈ 3, 2018

"ಕಾಗದ ದೋಣಿ" ಆಂಡ್ರೋಯ್ಡ್ ಅಪ್ಲಿಕೇಶನ್ ಬಳಸಿ

ಸ್ನೇಹಿತರೇ,
"ಕಾಗದ ದೋಣಿ" ಓದುವುದು ಈಗ ಮತ್ತಷ್ಟು ಸುಲಭವಾಗಿದ್ದು ನಮ್ಮ ಹೊಸ "ಕಾಗದ ದೋಣಿ" ಆಂಡ್ರೋಯ್ಡ್ ಅಪ್ಲಿಕೇಶನ್ ಬಳಸಿ ನಿಮ್ಮ ಮೊಬೈಲ್ ನಲಿ.

ಇಲ್ಲಿ ದೊರೆಯುವುದು

ಶನಿವಾರ, ಜೂನ್ 23, 2018

ಮಳೆ "ಕಾಲ - ಚಕ್ರ" - ಕವನ 12


ಓ ಸುಡುವ ಸೂರ್ಯನೇ
ನಿನಗೇಕೆ ಕೋಪವೇ ...
ಬಿಸಿಲ ಬೇಗೆ ನೆಲಕೆ ಬಡಿದು
 ಭೂತಾಯಿಯು ನರಳಿದೆ ...

ಓ ಮರಗಿಡ ಬೆಟ್ಟವೇ
ಸುಮ್ಮನೇಕೆ ನಿಂತಿರುವೇ ...
ನೀವು ತಡೆಯದ ತಂಗಾಳಿ
ಊರಬಿಟ್ಟು ಮರೆಯಾಗಿದೆ ...


ಓ ಅಲೆಮಾರಿ ಗಾಳಿಯೇ
ಎನ ವಿಳಾಸವ ಮರೆತೆಯೇ ...
ಕರೆದುಕೊಂಡು ಬಾರೊ ಒಮ್ಮೆ
ಬಿಳಿಮೋಡಗಳ ಹಿಂಡನೇ ...

ಓ ಬೆಳ್ಳಿ ಮೋಡವೇ
ಭೂತಾಯಿಯು ಬೇಡವೆ ...
ಬಿಸಿಲಬೇನೆಗೆ  ನರಳೋ ನೋಡಿ
ಕಣ್ ಮಳೆಹನಿಗಳ ಸುರಿಸಿರೆ ...

ಓ ಮಳೆಹನಿಗಳ ಮಾಲೆಯೇ
ನನ್ನ ದೂರ ತಿಳಿಯದೆ ...
ನಿನ್ನ ಬೆರೆತು ಈ ನೆಲವು
ಹಸಿರು ಹಸಿರಾ ಪಸರಿಸೆ ...

ಯಾವುದೊ ಈ ಮಾಯೆಯೋ
ಬಿಸಿಲು ಮಳೆಯ ಜಾಲವೋ ...
ಮಳೆ "ಕಾಲ - ಚಕ್ರ"ದೊಳಗೆ
ಉಕ್ಕಿ ಹರಿಯಲಿ ಏನ ಭಾವನೇ ..

ಗುರುವಾರ, ಮಾರ್ಚ್ 15, 2018

“ಸೋಮಾರಿ ಗಾನ” - ಕವನ 11



ಹೊತ್ತು ಕಳೆದರೇನಂತೇ 
ಜೊತೆಗೆ ಬರುವನು ಅವನು ..
ಸುತ್ತ ಇರುವವರ ತಿಳಿಯದೆ
ಎನಬೆನ್ನ ಬಿಡನು ಇವನು ..

ರವಿ ಬಂದರೇನಂತೇ
ಅವನಿಲ್ಲವೇ ನನಗಿಂದು ..
ಹೊತ್ತು ಕಳೆದರೂ ಹೋಗಲಿ
ಹೊಟ್ಟೆಗಿಟ್ಟು ಕೂಡ ಮರೆವೆನು ..

ಸ್ವಚ್ಛವಿಲ್ಲ ಎಂದರೇನಂತೇ
ಬೆಚ್ಚ ಮಲಗ ಬೇಕಿನ್ನು ..
ಎದ್ದು ಹೊರಡಬೇಕೆಂದರೆ
ಮುಗ್ಗರಿಸಿ ಬೀಳುವೆ ನಿನಬಲೆಗೆಂದು ..

ಅರ್ಧ ದಿನವು ನಿನದಾದರೇನಂತೇ
ನಾನಲ್ಲವೆ ನಿನ ಗುಲಾಮನು ..
ಯಾವ ಕೆಲಸವನೇಕೆ ಮಾಡಲಿ 
"ಸೋಮಾರಿ" ಎಂದೇಳುವೆ ನಿನ್ನ ಹೆಸರನು ..

ಭಾನುವಾರ, ಫೆಬ್ರವರಿ 18, 2018

“ಗಾಳಿ ಮಾತು” - ಕವನ 10





ಕಣ್ಣ ಸಿಲುಕದ ಗಾಳಿಯೊಂದು
ನುಸುಳಿ ಮನೆಗೆ ಬಂದಿದೆ..
ದಾರಿ ಮರೆತು ಬಂದಂತಿದೆ
ತರಗೆಲೆಗಳು ಅದರ ಜೊತೆಗೆಯೇ..

ಬಟ್ಟೆ ಬರೆಯು ಪುಟಗಳೆಲ್ಲ
ಹೆದರಿಕೊಂಡು ಓಡಿವೆ..
ಇದರ ಸ್ವಾಗತ ಬಯಸಿಕೊಂಡು
ಮರಗಿಡಗಳು ಬಾಗಿವೆ..

ಹಕ್ಕಿ ಹುಳುಗಳು ನಿನ್ನ ಬಗೆಯೆ
ಚೀರಿಕೊಂಡು ಸುತ್ತಿವೆ..
ನಿನ್ನ ತಂಪು ಮಾಡಲೆಂದೆ
ಮಳೆಹನಿಗಳು ಉದಿರಿವೆ..

ನಿನ್ನ ದಯೆಯೊ ನಿನ್ನ ಮಾಯೆಯೊ
ನನಗೊಂದೂ ತಿಳಿಯದು..
ನಿನ್ನ ನಂಬಿಕೊಂಡ ಜಗವು
ಬದುಕುವುದನ್ನ ಕಲಿತಿದೆ..

ಮಂಗಳವಾರ, ಜುಲೈ 4, 2017

“ಜನನ-ಮರಣ” - ಕವನ 9











ನಿದಿರೆಯೆಂಬ ಲೋಕದಲಿ
ನಡೆಯುತ್ತಿದೆ ಹೊಸ ತಿರುವುಗಳು..
ನಡುಗನಸಿನ ಪಾತ್ರದೊಳಗೆ
ನನ್ನನ್ನೊಮ್ಮೆ ಯಾರೋ ಕರೆವರು..


ಕಣ್ತೆರೆದು ನೋಡುತ್ತಿರಲು
ಹೊಸಜಗವ ನಾ ಕಂಡಿಹೆನು..
ಎಲ್ಲೋ ನೋಡಿರುವ ಈಜಗವು
ಹೊಸಬೆಳಕಲಿಂದು ಬೆರೆತಿಹುದು..


ಅಂದು ಕಂಡ ಇದೇ ಭುವಿಯು
ಮಂಜಾ ಮನದಿ ಮೂಡಿಹುದು..
ನಯನಗಳೆರಡು ಮಾಡಿವೆಯೊ ಮೋಡಿ
ನವಲೋಕದಂತಿಂದು ಕಾಣುವುದು..


ಮತ್ತೆ ಮರಣ ಮತ್ತೆ ಜನುಮ
ಪ್ರತಿದಿನವು ನಡೆವುದು..
ಕನಸು ನಿಜವೋ, ಕಣ್ತೆರೆದರೆ ನಿಜವೋ
ತಿಳಿಯದೆ ಮನವು ಕೊರಗುವುದು..


ಹೊಸಲೋಕದಿಂದ ಮತ್ತೆ ಮರಣ
ನಿದಿರೆಯಲೇ ನಾ ಕಳೆದೆನು..
ಮರುಜನನವು ಸಿಗುವುದೊ ನಾತಿಳಿಯೇ
ನಂಬಿಕೆಯೊಂದೆ ಇಲ್ಲಿ ಉಳಿದಿಹುದು..

ಮಂಗಳವಾರ, ಮೇ 23, 2017

7ರ ಮಗ್ಗಿಯಲ್ಲಿ ಜೀವನ ಚಕ್ರದ ಗಮ್ಮತ್ತು - ಟಾಂಗ್-ಕಿಂಗ್ (ಲೇಖನ) 1

7ರ ಮಗ್ಗಿಯಲ್ಲಿ ಜೀವನ ಚಕ್ರದ ಗಮ್ಮತ್ತು*


7 x 1 = 7 ಬಾಲ್ಯ ಪ್ರವೇಶ
7 x 2 = 14  ಯೌವ್ವನ ಪ್ರವೇಶ
7 x 3 = 21  ಪ್ರೀತಿ, ಪ್ರೇಮ, ಪ್ರಣಯ
7 x 4 = 28  ವಿವಾಹ, ಸ೦ತಾನ ಪ್ರಾಪ್ತಿ
7 x 5 = 35  ಸಂಸಾರ ಸಾಗರದಲ್ಲಿ ಈಜು ಸ್ಪರ್ದೆ
7 x 6 = 42  ಮಕ್ಕಳ ಯೌವ್ವನ ಪ್ರವೇಷ
7 x 7 = 49  ಸಂಸಾರದಲ್ಲಿ ರಾಜಕೀಯ, ನಾನು ನನ್ನ ಮನೆಯಲ್ಲಿ ಪರಕೀಯ
7 x 8 = 56  ನಿವೃತ್ತಿ, ಮಾವ ಅಥವಾ ಅಳಿಯ ಆಗುವ ಯೋ (ರೋ) ಗ
7 x 9 = 63  ಅರವತ್ತಕ್ಕೆ ಅರಳು ಮರಳು, ಷಷ್ಟಿ ಪೂರ್ತಿ
7 x 10 = 70 ವಿದಾಯ.!!!
ಸೋ .....ಇರೋ ತನಕ ಜಾಲಿ .ಆಮೇಲೆ ಖಾಲಿ ಊರಿಗೋಂದ್ ಊಟ...ಗೋಡೆಗೊಂದ್.... ಫೋಟೋ. ಅಸ್ಟೆ ಜೀವನ.....